ಉಡುಪಿ: ಕಾರ್ಕಳದ ಈದು ನಕ್ಸಲ್ ಎನ್ಕೌಂಟರ್ ಪ್ರಕರಣದ ಆರೋಪಿ ಶಿವಮೊಗ್ಗದ ದೇವೇಂದ್ರ ಅವರನ್ನು ಖುಲಾಸೆಗೊಳಿಸಿ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯ ಬುಧವಾರ ಆದೇಶ ಹೊರಡಿಸಿತು. ರಾಜ್ಯದಲ್ಲಿ ಸಂಚಲನ ಮೂಡಿಸಿದ್ದ ಈ ಪ್ರಕರಣದಲ್ಲಿ ಹಾಜಿಮಾ ಮತ್ತು ಪಾರ್ವತಿ ಎಂಬುವರು ಪೊಲೀಸರ ಗುಂಡಿಗೆ ಬಲಿಯಾಗಿದ್ದರು, ಪೊಲೀಸರು ಸಹ ಗಾಯಗೊಂಡಿದ್ದರು.