‘ಕುಮಾರ ಪರ್ವ ಯಾತ್ರೆಗೆ ತಾಲ್ಲೂಕಿನಿಂದ ಒಟ್ಟು 100ಕ್ಕೂ ಹೆಚ್ಚು ವಾಹನಗಳ ವ್ಯವಸ್ಥೆ ಮಾಡಲಾಗಿದ್ದು, ಸುಮಾರು 5000ಕ್ಕೂ ಅಧಿಕ ಕಾರ್ಯಕರ್ತರು ಇಲ್ಲಿಂದ ತೆರಳಲಿದ್ದಾರೆ. ಪಕ್ಷದಲ್ಲಿ ಯಾವುದೇ ಭಿನ್ನಮತವಿಲ್ಲ. ಕೆಲವರು ರಾಜೀನಾಮೆಯ ನಾಟಕ ಆಡುತ್ತಿದ್ದಾರೆ. ಗೊಂದಲ ಮೂಡಿಸುವ ಬದಲು, ರಾಜೀನಾಮೆ ಕೊಟ್ಟು ಹೋಗಿಬಿಡಬೇಕು. ಈ ಬಗ್ಗೆ ಕುಮಾರಸ್ವಾಮಿ ಅವರು ಸೂಕ್ತ ಸಮಯದಲ್ಲಿ ನಿರ್ಧಾರ ತೆಗೆದುಕೊಳ್ಳುತ್ತಾರೆ’ ಎಂದು ಮಲ್ಲಿಕಾರ್ಜುನ ಕುಟ್ರಿ ‘ಪ್ರಜಾವಾಣಿ’ಗೆ ತಿಳಿಸಿದರು.