ಹಾಸನ: ‘ದೇಶದಲ್ಲಿ ಕಾಂಗ್ರೆಸ್ ಶಕ್ತಿ ಕ್ಷೀಣಿಸುತ್ತಿದೆ. ಬಿಹಾರ, ಉತ್ತರ ಪ್ರದೇಶ, ಮಧ್ಯ ಪ್ರದೇಶದ ಉಪಚುನಾವಣೆಗಳೇ ಇದಕ್ಕೆ ಉದಾಹರಣೆ. ಉತ್ತರ ರಾಜ್ಯಗಳ ಉಪಚುನಾವಣೆಗಳಲ್ಲಿ ಬಿಜೆಪಿಗೂ ಸೋಲಾಗಿದೆ. ಇದು ರಾಷ್ಟ್ರ ರಾಜಕಾರಣದ ಮೇಲೆ ಪ್ರಭಾವ ಬೀರಲಿದ್ದು, ತೃತೀಯ ಶಕ್ತಿಗೆ ಒಂದು ರೂಪ ಸಿಗಬಹುದು’ ಎಂದು ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಅಭಿಪ್ರಾಯಪಟ್ಟರು.