ಈ ಸಂಬಂಧ ಕುಲಪತಿ ಪ್ರೊ.ಎಚ್.ಎಂ.ಮಹೇಶ್ವರಯ್ಯ ಅವರು ಮೂಲಕ ರಾಷ್ಟ್ರಪತಿಗೆ ಮಂಗಳವಾರ ಮನವಿ ಸಲ್ಲಿಸಿರುವ ವಿಶ್ವವಿದ್ಯಾಲಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನೌಕರರ ಮತ್ತು ಅಖಿಲ ಭಾರತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ಸಂಘವು, ‘ಮಿಸಲಾತಿ ನಿರ್ಧರಿಸುವಾಗ ವಿಶ್ವವಿದ್ಯಾಲಯದ ಬದಲಿಗೆ ಅದರ ವಿಭಾಗವನ್ನು ಒಂದು ಯುನಿಟ್ ಎಂದು ಪರಿಗಣಿಸಬೇಕು ಎಂದು ಯು.ಜಿ.ಸಿ ಹೇಳಿದೆ. ಈ ಆದೇಶವು ಉಪನ್ಯಾಸಕ ಹುದ್ದೆಗಳಲ್ಲಿ ಪರಿಶಿಷ್ಟರು, ಹಿಂದುಳಿದ ವರ್ಗಗಳವರ ಸಂಖ್ಯೆಯನ್ನು ಕಡಿಮೆ ಮಾಡಲಿದೆ’ ಎಂದು ತಿಳಿಸಿದ್ದಾರೆ.