ಸಚಿವರ ಭರವಸೆ: ‘ನೌಕರರ ವೇತನವನ್ನು ₹ 18 ಸಾವಿರಕ್ಕೆ ಹೆಚ್ಚಿಸುವಂತೆ ಸರ್ಕಾರದ ಮುಂದೆ ಬೇಡಿಕೆ ಇಟ್ಟಿದ್ದೆವು. ಆದರೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆ ಸಚಿವರು ಹಂತ ಹಂತವಾಗಿ ವೇತನ ಹೆಚ್ಚಿಸುವ ಭರವಸೆ ನೀಡಿ ಆದೇಶ ಹೊರಡಿಸಿದ್ದಾರೆ. ಭವಿಷ್ಯದಲ್ಲಿ ನೌಕರರಿಗೆ ಭವಿಷ್ಯ ನಿಧಿ, ಗ್ರಾಚ್ಯುಟಿ ಮತ್ತು ವಿಮಾ ಸವಲತ್ತು ಕಲ್ಪಿಸಬೇಕು’ ಎಂದು ಒತ್ತಾಯಿಸಿದರು.