ಗೌರಿಬಿದನೂರಿನಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡುತ್ತ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ‘ಯಡಿಯೂರಪ್ಪ ಅವರು ಜೈಲಿಗೆ ಹೋಗಿ ಬಂದಿದ್ದಾರೆ ಎಂಬ ಹೇಳಿಕೆಗೆ ಸಂಬಂಧಿಸಿದಂತೆ ಕೋರ್ಟ್ ನೋಟಿಸ್ ಜಾರಿ ಮಾಡಿರುವ ವಿಚಾರ ಮಾಧ್ಯಮಗಳಿಂದ ತಿಳಿದು ಬಂದಿದೆ. ನಾನಿನ್ನು ಆ ನೋಟಿಸ್ ನೋಡಿಲ್ಲ. ಯಡಿಯೂರಪ್ಪ ಅವರು ನನ್ನ ವಿರುದ್ಧ ಸಾರ್ವಜನಿಕ ವೇದಿಕೆಗಳಲ್ಲಿ ಕೀಳು ಭಾಷೆ, ಏಕವಚನದಲ್ಲಿ ಟೀಕಿಸುತ್ತಾರೆ. ಅದಕ್ಕೆ ಏನು ಹೇಳುವುದು? ಆದರೆ ನಾನು ಆ ಭಾಷೆಯಲ್ಲಿ ಮಾತನಾಡಿಲ್ಲ’ ಎಂದರು.