ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೈಲಿಗೆ ಹೋಗಿದ್ದು ನಿಜ, ಅದನ್ನೇ ಹೇಳಿರುವೆ: ಸಿಎಂ ಸಿದ್ದರಾಮಯ್ಯ

Last Updated 15 ಮಾರ್ಚ್ 2018, 13:49 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ‘ಯಡಿಯೂರಪ್ಪ ಅವರು ಜೈಲಿಗೆ ಹೋಗಿ ಬಂದಿರೋದು ನಿಜ. ಹೀಗಾಗಿ ನಾನು ಅದನ್ನೇ ಹೇಳಿರುವೆ. ಆದರೆ ಈ ವಿಚಾರವಾಗಿ ಹೈಕೋರ್ಟ್‌ ಜಾರಿಗೊಳಿಸಿದ ತುರ್ತು ನೋಟಿಸ್‌ನಲ್ಲಿ ಏನು ಹೇಳಿದ್ದಾರೆ ಎಂದು ಇನ್ನೂ ಗೊತ್ತಾಗಿಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಗೌರಿಬಿದನೂರಿನಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡುತ್ತ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ‘ಯಡಿಯೂರಪ್ಪ ಅವರು ಜೈಲಿಗೆ ಹೋಗಿ ಬಂದಿದ್ದಾರೆ ಎಂಬ ಹೇಳಿಕೆಗೆ ಸಂಬಂಧಿಸಿದಂತೆ ಕೋರ್ಟ್ ನೋಟಿಸ್ ಜಾರಿ ಮಾಡಿರುವ ವಿಚಾರ ಮಾಧ್ಯಮಗಳಿಂದ ತಿಳಿದು ಬಂದಿದೆ. ನಾನಿನ್ನು  ಆ ನೋಟಿಸ್ ನೋಡಿಲ್ಲ. ಯಡಿಯೂರಪ್ಪ ಅವರು ನನ್ನ ವಿರುದ್ಧ ಸಾರ್ವಜನಿಕ ವೇದಿಕೆಗಳಲ್ಲಿ ಕೀಳು ಭಾಷೆ, ಏಕವಚನದಲ್ಲಿ ಟೀಕಿಸುತ್ತಾರೆ. ಅದಕ್ಕೆ ಏನು ಹೇಳುವುದು? ಆದರೆ ನಾನು ಆ ಭಾಷೆಯಲ್ಲಿ ಮಾತನಾಡಿಲ್ಲ’ ಎಂದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT