ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವ ಕುರಿತು ವಿವಿಧ ಪಕ್ಷಗಳು ಗುರುವಾರ ಲೋಕಸಭೆಯಲ್ಲಿ ನಡೆಸಿದ ಪ್ರತಿಭಟನೆ ಗದ್ಧಲದ ರೂಪ ಪಡೆಯಿತು. ಇದೇ ಸಂದರ್ಭದಲ್ಲಿ ವೈಎಸ್ಆರ್ ಕಾಂಗ್ರೆಸ್ ಎನ್ಡಿಎ ಸರ್ಕಾರದ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡಿಸುವ ಸಲುವಾಗಿ ನೋಟಿಸ್ ಜಾರಿ ಮಾಡಿದ್ದು, ಲೋಕಸಭೆಯ ವಿರೋಧ ಪಕ್ಷ ಸೇರಿ ಇತರ ಪಕ್ಷಗಳ ಬೆಂಬಲ ಕೋರಿದೆ.