ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಂದ್ರ ಸರ್ಕಾರದ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡನೆಗೆ ವೈಎಸ್‌ಆರ್‌ ಕಾಂಗ್ರೆಸ್‌ ನಿರ್ಧಾರ; ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿ ಬೆಂಬಲಿಸುವ ಸೂಚನೆ

Last Updated 15 ಮಾರ್ಚ್ 2018, 18:03 IST
ಅಕ್ಷರ ಗಾತ್ರ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದ ವಿರುದ್ಧ ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷ ಶುಕ್ರವಾರ ಅವಿಶ್ವಾಸ ಗೊತ್ತುವಳಿ ಮಂಡಿಸುವುದಾಗಿ ಘೋಷಿಸಿದೆ.

ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವ ಕುರಿತು ವಿವಿಧ ಪಕ್ಷಗಳು ಗುರುವಾರ ಲೋಕಸಭೆಯಲ್ಲಿ ನಡೆಸಿದ ಪ್ರತಿಭಟನೆ ಗದ್ಧಲದ ರೂಪ ಪಡೆಯಿತು. ಇದೇ ಸಂದರ್ಭದಲ್ಲಿ ವೈಎಸ್ಆರ್‌ ಕಾಂಗ್ರೆಸ್ ಎನ್‌ಡಿಎ ಸರ್ಕಾರದ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡಿಸುವ ಸಲುವಾಗಿ ನೋಟಿಸ್‌ ಜಾರಿ ಮಾಡಿದ್ದು, ಲೋಕಸಭೆಯ ವಿರೋಧ ಪಕ್ಷ ಸೇರಿ ಇತರ ಪಕ್ಷಗಳ ಬೆಂಬಲ ಕೋರಿದೆ.

ಅಗತ್ಯವಾದಲ್ಲಿ ತೆಲುಗು ದೇಶಂ ಪಾರ್ಟಿ(ಟಿಡಿಪಿ) ಅವಿಶ್ವಾಸ ಗೊತ್ತುವಳಿ ಮಂಡನೆಯನ್ನು ಬೆಂಬಲಿಸಲಿದೆ ಎಂದು ಆಂಧ್ರ ಪ್ರದೇಶ ಸಿಎಂ ಎನ್‌.ಚಂದ್ರಬಾಬು ನಾಯ್ಡು ವಿಧಾನಸಭೆಯಲ್ಲಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT