ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ ಆರೋಪಿಗಳನ್ನು ಬಂಧಿಸುವ ಜಾರಿ ನಿರ್ದೇಶನಾಲಯದ ಅಧಿಕಾರವನ್ನು ಪ್ರಶ್ನಿಸಿ ಕಾರ್ತಿ ದೆಹಲಿ ಹೈಕೋರ್ಟ್ನಲ್ಲಿ ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ತನಗೆ ವರ್ಗಾಯಿಸಿಕೊಂಡಿದೆ. ಕಾಯ್ದೆ ಅಡಿಯಲ್ಲಿ ಇರುವ ಬಂಧನ ಅಧಿಕಾರದ ಬಗ್ಗೆ ವಿವಿಧ ಹೈಕೋರ್ಟ್ಗಳು ಭಿನ್ನ ನಿಲುವುಗಳನ್ನು ಪ್ರಕಟಿಸಿವೆ. ಹಾಗಾಗಿ ಈ ವಿಚಾರವನ್ನು ಸುಪ್ರೀಂ ಕೋರ್ಟ್ ವಿಚಾರಣೆಗೆ ಒಳಪಡಿಸುವುದೇ ಉತ್ತಮ ಎಂದು ಪೀಠ ಹೇಳಿದೆ.