ಬಿಜಿಎಸ್ ಶಿಕ್ಷಣ ಸಂಸ್ಥೆ ಮುಖ್ಯ ಆಡಳಿತಾಧಿಕಾರಿ ಎನ್.ಶಿವರಾಂ ರೆಡ್ಡಿ ಮಾತನಾಡಿ, ‘ಇವತ್ತಿನ ಸ್ಪರ್ಧಾತ್ಮಕ ಯುಗದಲ್ಲಿ ಶಿಕ್ಷಣದಿಂದ ಜಗತ್ತು ನಿಂತಿದೆ. ವಿದ್ಯೆ ಇಲ್ಲದೆ ಯಾರೊಬ್ಬರು ಪರಿಪೂರ್ಣ ವ್ಯಕ್ತಿಯಾಗಲು ಸಾಧ್ಯವಿಲ್ಲ. ವಿದ್ಯಾರ್ಥಿಗಳು ವಿದ್ಯಾಭ್ಯಾಸ ಪಡೆಯ ದಿದ್ದರೆ ಯಾವೊಂದು ಕೆಲಸಕ್ಕೆ ಹೋದರೂ ಪ್ರಯೋಜನವಿಲ್ಲ. ಪರೀಕ್ಷೆಯಲ್ಲಿ ಪಡೆಯುವ ಒಂದೊಂದು ಅಂಕವೂ ಮಹತ್ವವಾಗಿರುತ್ತದೆ. ಅಂಕಕ್ಕೆ ನಮ್ಮ ಜೀವನವನ್ನೇ ಬದಲಾಯಿಸಿ ಬಿಡುವ ಶಕ್ತಿ ಇದೆ’ ಎಂದು ತಿಳಿಸಿದರು.