ಜಿಲ್ಲಾಧಿಕಾರಿ ಡಾ.ಎಂ.ಲೋಕೇಶ್ ಮಾತನಾಡಿ, ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಮತಗಟ್ಟೆಗಳನ್ನು ಈ ಹಿಂದಿನ ಘಟನೆಗಳನ್ನು ಆಧರಿಸಿ ನಿರ್ಧರಿಸಲಾಗುತ್ತದೆ. ಕೂಲಿಕಾರ್ಮಿಕರಿಗೆ ಮತದಾನದ ದಿನ ಹೆಚ್ಚಿನ ಕೂಲಿ ನೀಡಿ ಮತದಾನ ಮಾಡದಂತೆ ತಡೆಹಿಡಿಯುವುದು, ಹಣದ ಆಮಿಷ ಒಡ್ಡುವುದು ಅಥವಾ ಪರೋಕ್ಷವಾಗಿ ಬೆದರಿಕೆ ಹಾಕುವುದು ಇತ್ಯಾದಿಗಳ ಬಗ್ಗೆ ಮಾಹಿತಿ ಪಡೆದು ಪ್ರತಿಯೊಬ್ಬರೂ ತಮ್ಮ ಹಕ್ಕು ಚಲಾಯಿಸಲು ಸಾಧ್ಯವಾಗುವಂತಹ ವಾತಾವರಣವನ್ನು ನಿರ್ಮಿಸುವುದು ಎಲ್ಲರ ಜವಾಬ್ದಾರಿಯಾಗಿದೆ ಎಂದರು.