ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈಚೆಗೆ ರಾಯಚೂರು ಜಿಲ್ಲೆ ಕೆಲ ಕ್ಷೇತ್ರಗಳಲ್ಲಿನ ಆಕಾಂಕ್ಷಿ ಅಭ್ಯರ್ಥಿಗಳ ಆದ್ಯತೆ ಪಟ್ಟಿ ಪ್ರಕಟಗೊಂಡಿದೆ. ಜಿಲ್ಲೆಯ ಮೀಸಲು ವಿಧಾನಸಭಾ ಕ್ಷೇತ್ರದಲ್ಲಿ ಮಾದಿಗ, ಛಲವಾದಿ ಬೆಂಬಲಿತ ಸಮುದಾಯದ ಅಸ್ಪೃಶ್ಯರ ಹೆಸರು ಸೇರ್ಪಡೆ ಮಾಡಿದ್ದು ಸ್ವಾಗತಾರ್ಹ ಕ್ರಮವಾಗಿದೆ’ ಎಂದು ಹರ್ಷ ವ್ಯಕ್ತಪಡಿಸಿದರು.