ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ

ಪೊಲೀಸ್‌ ಅಧಿಕಾರಿಗಳೊಂದಿಗೆ ಡಿ.ಜಿ ಸಭೆ
Last Updated 16 ಮಾರ್ಚ್ 2018, 10:08 IST
ಅಕ್ಷರ ಗಾತ್ರ

ಹುಬ್ಬಳ್ಳಿ: ‘ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಯಾವುದೇ ಅಕ್ರಮಕ್ಕೆ ಅವಕಾಶ ನೀಡದಂತೆ ಕ್ರಮಕೈಗೊಳ್ಳಬೇಕು’ ಎಂದು ರಾಜ್ಯ ಪೊಲೀಸ್‌ ಮಹಾನಿರ್ದೇಶಕಿ ನೀಲಮಣಿ ಎನ್‌.ರಾಜು ಪೊಲೀಸ್‌ ಅಧಿಕಾರಿಗಳಿಗೆ ಸೂಚಿಸಿದರು.

ಹುಬ್ಬಳ್ಳಿ–ಧಾರವಾಡ ಪೊಲೀಸ್‌ ಕಮಿಷನರೇಟ್‌ ಸಭಾಂಗಣದಲ್ಲಿ ಗುರುವಾರ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಮಾತನಾಡಿದರು.

‘ಮದ್ಯ, ಹಣ ಅಕ್ರಮ ಸಾಗಣೆ ಬಗ್ಗೆ ನಿಗಾ ವಹಿಸಬೇಕು. ಚೆಕ್‌ಪೋಸ್ಟ್‌ಗಳನ್ನು ತೆರೆದು, ನಿರಂತರವಾಗಿ ವಾಹನಗಳ ತಪಾಸಣೆ ಮಾಡಬೇಕು. ಯಾವುದೇ ಅಕ್ರಮ ಕಂಡುಬಂದರೂ, ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು. ವಿಧಾನಸಭಾ ಚುನಾವಣಾ ಕ್ಷೇತ್ರಗಳ ವ್ಯಾಪ್ತಿಯ ಸೂಕ್ಷ್ಮ ಪ್ರದೇಶಗಳ ಬಗ್ಗೆ ಹದ್ದಿನ ಕಣ್ಣಿರಿಸಬೇಕು’ ಎಂದು ಹೇಳಿದರು.

ಪೊಲೀಸರ ಕ್ರಮಕ್ಕೆ ಮೆಚ್ಚುಗೆ: ‘ಅವಳಿ ನಗರದಲ್ಲಿ ಜಾರಿ ಮಾಡಲಾಗಿರುವ ‘ಹೆಲ್ಮೆಟ್‌ ಧರಿಸದಿದ್ದರೆ, ಪೆಟ್ರೋಲ್‌ ಇಲ್ಲ’ ವಿನೂತನ ಪ್ರಯೋಗಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ಕಮಿಷನರ್ ಎಂ.ಎನ್‌. ನಾಗರಾಜ, ಎಸ್ಪಿ ಜಿ. ಸಂಗೀತಾ, ಡಿಸಿಪಿಗಳಾದ ರೇಣುಕಾ ಸುಕುಮಾರ್‌, ನೇಮಗೌಡ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT