ಬೆಂಗಳೂರು: ಮಕ್ಕಳಿಗಾಗಿ ಮಧ್ಯಾಹ್ನದ ಬಿಸಿಯೂಟ ವಿತರಿಸಲು ಅದಮ್ಯ ಚೇತನ ಸ್ವಯಂಸೇವಾ ಸಂಸ್ಥೆಗೆ ₹ 18 ಲಕ್ಷ ವೆಚ್ಚದ ವಾಹನವನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ಕೊಡುಗೆ ನೀಡಿದೆ.
ಶುಕ್ರವಾರ ಇಲ್ಲಿ ನಡೆದ ಸಮಾರಂಭದಲ್ಲಿ ಎಸ್ಬಿಐ ಅಧ್ಯಕ್ಷ ರಜನೀಶ್ ಕುಮಾರ್ ಅವರು ವಾಹನವನ್ನು ಹಸ್ತಾಂತರಿಸಿದರು.
‘ಮಕ್ಕಳಿಗೆ ಗುಣಮಟ್ಟ ಮತ್ತು ಪೌಷ್ಟಿಕ ಊಟ ಒದಗಿಸಲು ಎಸ್ಬಿಐ ಈ ನೆರವಿನ ಹಸ್ತ ಚಾಚಿದೆ’ ಎಂದು ರಜನೀಶ್ ಕುಮಾರ್ ಹೇಳಿದರು.
ಕಾರ್ಯಕ್ರಮದಲ್ಲಿ ಬ್ಯಾಂಕ್ನ ಬೆಂಗಳೂರು ಪ್ರಾದೇಶಿಕ ಪ್ರಧಾನ ಕಚೇರಿಯ ಚೀಫ್ ಜನರಲ್ ಮ್ಯಾನೇಜರ್ ಫಾರೂಕ್ ಷಹಾಬ್, ಅದಮ್ಯ ಚೇತನ ಸಂಸ್ಥೆಯ ಮ್ಯಾನೇಜಿಂಗ್ ಟ್ರಸ್ಟಿ ಡಾ.ತೇಜಸ್ವಿನಿ ಅನಂತಕುಮಾರ್ ಉಪಸ್ಥಿತರಿದ್ದರು.