ಕೃಷ್ಣಾಪುರ ಮಠದ ವಿದ್ಯಾಸಾಗರ, ಅದಮಾರು ಮಠದ ವಿಶ್ವಪ್ರಿಯ, ಕಿರಿಯ ಈಶಪ್ರಿಯ, ಕಾಣಿಯೂರು ಮಠದ ವಿದ್ಯಾವಲ್ಲಭ, ಸೋದೆ ಮಠದ ವಿಶ್ವವಲ್ಲಭ ಹಾಗೂ ಪೇಜಾವರ ಕಿರಿಯ ವಿಶ್ವಪ್ರಸನ್ನ ಸ್ವಾಮೀಜಿ ಸಭೆಯಲ್ಲಿ ಭಾಗವಹಿಸಿದ್ದರು. ಅಷ್ಟ ಮಠಗಳ ಘನತೆಗೆ ಧಕ್ಕೆಯಾಗುವಂತೆ ನಡೆದುಕೊಳ್ಳುತ್ತಿರುವ ಲಕ್ಷ್ಮೀವರತೀರ್ಥ ಸ್ವಾಮೀಜಿ ಅವರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಎಲ್ಲರೂ ಒಕ್ಕೊರಲಿನಿಂದ ಒತ್ತಾಯಿಸಿದರು ಎಂದು ತಿಳಿದು ಬಂದಿದೆ.