ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ‘ಗಣಿಗಾರಿಕೆ ಅನುಮತಿ ನೀಡುವಾಗ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಮಾರ್ಗಸೂಚಿಗಳನ್ನು ಪಾಲಿಸಬೇಕಿತ್ತು. ಆದರೆ ಗ್ರಾಮದಿಂದ ಕೇವಲ 50 ಮೀಟರ್, ಹೆದ್ದಾರಿಯಿಂದ ಕೇವಲ 100 ಮೀಟರ್ ಅಂತರದಲ್ಲಿ ಗಣಿಗಾರಿಕೆಗೆ ಅನುಮತಿ ನೀಡಲಾಗಿದೆ. ಅಧಿಕಾರಿಗಳು ನಿಯಮಾವಳಿಗಳನ್ನು ಗಾಳಿಗೆ ತೂರಿ, ಹಣ ಪಡೆದು ಅನುಮತಿ ನೀಡಿದ್ದಾರೆ’ ಎಂದು ಆರೋಪಿಸಿದರು.