ನಿಜವಾದ ಫಲಾನುಭವಿಗಳಿಗೆ ಎಂಎಸ್ಪಿ ಲಾಭ ತಲುಪುವಂತೆ ಹೊಸ ವ್ಯವಸ್ಥೆ ರೂಪಿಸುವ ಬಗ್ಗೆ ಎಲ್ಲ ರಾಜ್ಯ ಸರ್ಕಾರಗಳ ಜತೆ ಮಾತುಕತೆ ನಡೆಯುತ್ತಿದೆ. ರೈತರು ಎಣ್ಣೆಬೀಜಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಬೆಳೆಯಬೇಕು. ಇದರಿಂದ ಖಾದ್ಯ ತೈಲಗಳ ಆಮದನ್ನು ಗಣನೀಯ ಪ್ರಮಾಣದಲ್ಲಿ ಕಡಿಮೆ ಮಾಡಬಹುದು. ಸಾವಯವ ಕೃಷಿಗೆ ಒತ್ತು ನೀಡುವ ಮೂಲಕ 2022ರ ವೇಳೆಗೆ ಯೂರಿಯಾ ಬಳಕೆಯನ್ನು ಅರ್ಧದಷ್ಟು ಕಡಿಮೆ ಮಾಡಬೇಕು ಎಂದು ಪ್ರಧಾನಿ ಮನವಿ ಮಾಡಿದರು.