‘ಶ್ರೀಲಂಕಾ ತಂಡ ಪ್ರಶಸ್ತಿ ಸುತ್ತು ಪ್ರವೇಶಿಸಲು ವಿಫಲವಾಗಿತ್ತು. ಹೀಗಾಗಿ ಫೈನಲ್ ಪಂದ್ಯ ವೀಕ್ಷಿಸಲು ಹೆಚ್ಚು ಜನ ಬರುವುದಿಲ್ಲ ಎಂದು ನಾವೆಲ್ಲಾ ಭಾವಿಸಿದ್ದೆವು. ಕ್ರೀಡಾಂಗಣದಲ್ಲಿ 20,000ಕ್ಕೂ ಹೆಚ್ಚು ಮಂದಿ ಸೇರಿದ್ದನ್ನು ಕಂಡು ಅಚ್ಚರಿಯಾಯಿತು. ಲೀಗ್ ಹಂತದಲ್ಲಿ ನಾವು ಬಾಂಗ್ಲಾ ಎದುರು ಆಡಿದ್ದಾಗ ಪಂದ್ಯ ನೋಡಲು ಬೆರಳೆಣಿಕೆಯಷ್ಟು ಮಂದಿ ಸೇರಿದ್ದರು’ ಎಂದು ದಿನೇಶ್ ತಿಳಿಸಿದ್ದಾರೆ.