‘ಪತಿಯು ಮಾರ್ಚ್ 14ರಂದು ಚಿಕ್ಕ ವಿಷಯಕ್ಕೆ ಜಗಳ ಮಾಡಿ ಮುಖಕ್ಕೆ ಹೊಡೆದಿದ್ದಾರೆ. ಆಗ ಮೂಗು ಮತ್ತು ಬಾಯಿಯಿಂದ ರಕ್ತ ಬಂದಿದೆ. ಎಡಗಣ್ಣಿನ ಕೆಳಗೆ ಗಾಯವಾಗಿದೆ. ನನ್ನನ್ನು ಸಾಯಿಸುವ ಉದ್ದೇಶದಿಂದ ಕುತ್ತಿಗೆ ಹಿಡಿದು ಹೊಟ್ಟೆಗೆ ಹೊಡೆದಿದ್ದಾರೆ. ಆಗ ನನಗೆ ಪ್ರಜ್ಞೆ ತಪ್ಪಿತು. ಆದರೆ ನನಗೆ ಚಿಕಿತ್ಸೆ ಕೊಡಿಸುವ ಬದಲು ಮನೆ ಬಿಟ್ಟು ಹೋಗಿದ್ದಾರೆ’ ಎಂದು ಚೈತ್ರಾ ಅವರು ಪತಿ ವಿರುದ್ಧ ನೀಡಿರುವ ದೂರಿನಲ್ಲಿ ಹೇಳಿದ್ದಾರೆ.