ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಷ್ಟ್ರಪತಿ ರಾಮನಾಥ ಕೋವಿಂದ್‌ರಿಂದ ಪದ್ಮ ಪುರಸ್ಕಾರ ಪ್ರದಾನ

Last Updated 20 ಮಾರ್ಚ್ 2018, 14:30 IST
ಅಕ್ಷರ ಗಾತ್ರ

ನವದೆಹಲಿ: ತಮಿಳು ಚಿತ್ರರಂಗದ ಸಂಗೀತ ನಿರ್ದೇಶಕ ಇಳಯರಾಜ, ಕಲೆ–ಸಂಗೀತ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಕರ್ನಾಟಕದ ರುದ್ರಪಟ್ಟಣಂ ತ್ಯಾಗರಾಜನ್‌ ಹಾಗೂ ತಾರಾನಾಥನ್‌ ಸೇರಿದಂತೆ ಒಟ್ಟು 85 ಮಂದಿಗೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಪದ್ಮ ಪುರಸ್ಕಾರ ಪ್ರದಾನ ಮಾಡಿದರು.

ಈ ಪೈಕಿ ಮೂವರಿಗೆ ಪದ್ಮವಿಭೂಷಣ, 9 ಜನರಿಗೆ ಪದ್ಮಭೂಷಣ ಹಾಗೂ 73 ಜನ ಸಾಧಕರಿಗೆ ಪದ್ಮಶ್ರೀ ಗೌರವ ದೊರೆತಿದೆ.

ಮಂಗಳವಾರ ಸಂಜೆ ನಡೆದ ಪದ್ಮ ಪುರಸ್ಕಾರ ಪ್ರದಾನ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು, ಗೃಹ ಸಚಿವ ರಾಜನಾಥ್ ಸಿಂಗ್, ಲೋಕಸಭೆಯ ಸ್ಪೀಕರ್ ಸುಮಿತ್ರಾ ಮಹಾಜನ್, ಎನ್‌ಸಿಪಿ ವರಿಷ್ಠ ಶರದ್‌ ಪವಾರ್ ಸೇರಿದಂತೆ ಅನೇಕ ಗಣ್ಯರು ಮತ್ತು ಕೇಂದ್ರ ಸಚಿವರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT