ಪತಿ ನಿಧನದ ಸುದ್ದಿ ರಾತ್ರಿಯೇ ತಿಳಿದ ಶಶಿಕಲಾ, ಬೆಳಿಗ್ಗೆ 10 ಗಂಟೆಗೆ ತಮ್ಮ ವಕೀಲರ ಮೂಲಕ ಕಾರಾಗೃಹದ ಮುಖ್ಯ ಅಧೀಕ್ಷಕ ಸೋಮಶೇಖರ್ ಅವರಿಗೆ ಪೆರೋಲ್ ಅರ್ಜಿ ಸಲ್ಲಿಸಿದರು. ಹಿರಿಯ ಅಧಿಕಾರಿಗಳ ಜತೆ ಚರ್ಚಿಸಿ ಅರ್ಜಿಯನ್ನು ಪುರಸ್ಕರಿಸಿದ ಅಧೀಕ್ಷಕರು, 15 ದಿನಗಳ ತುರ್ತು ಪೆರೋಲ್ ಮಂಜೂರು ಮಾಡಿದರು. ಮಧ್ಯಾಹ್ನ 12 ಗಂಟೆಗೆ ಜೈಲಿನಿಂದ ಹೊರಬಂದ ಅವರು, ಸಂಬಂಧಿಕರ ಜತೆ ಕಾರಿನಲ್ಲಿ ಚೆನ್ನೈನತ್ತ ಹೊರಟರು.