ಕಲಬುರ್ಗಿ: ‘ಲಿಂಗಾಯತ ಸ್ವತಂತ್ರ ಧರ್ಮ ಮಾನ್ಯತೆಗೆ ಸಂಬಂಧಿಸಿದಂತೆ ತನ್ನ ನಿಲುವು ಏನು ಎಂಬುದನ್ನು ಬಿಜೆಪಿ ಸ್ಪಷ್ಟಪಡಿಸಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ ಆಗ್ರಹಿಸಿದರು.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಚಿವ ಸಂಪುಟದ ನಿರ್ಧಾರವನ್ನು ವೀರಶೈವ ಮಹಾಸಭಾ ಸ್ವಾಗತಿಸಿದೆ. ಆದರೆ ಪಂಚಪೀಠಗಳು ಏಕೆ ವಿರೋಧಿಸುತ್ತಿವೆಯೋ ಗೊತ್ತಿಲ್ಲ. ಪ್ರತ್ಯೇಕ ಧರ್ಮ ಮಾನ್ಯತೆಗಾಗಿ ಕೇಂದ್ರ ಸರ್ಕಾರಕ್ಕೆ ಕೂಡಲೇ ಶಿಫಾರಸು ಮಾಡಲಾಗುವುದು’ ಎಂದು ತಿಳಿಸಿದರು.