ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ

Last Updated 20 ಮಾರ್ಚ್ 2018, 19:30 IST
ಅಕ್ಷರ ಗಾತ್ರ

ಬೆಂಗಳೂರು: ರಾಮಮೂರ್ತಿನಗರ ಬಳಿಯ ಬಿ.ಚನ್ನಸಂದ್ರದಲ್ಲಿ ಮಂಗಳವಾರ ಸಂಜೆ ದಿನೇಶ್ (24) ಎಂಬುವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ.

ಯಾದಗಿರಿಯ ದಿನೇಶ್ (24) ಅವರ ಪೋಷಕರು ಕೆಲಸ ಅರಸಿ ನಗರಕ್ಕೆ ಬಂದಿದ್ದರು. ಆರಂಭದಲ್ಲಿ ವಿಜಯನಗರದಲ್ಲಿ ವಾಸವಿದ್ದ ಪೋಷಕರು, ನಾಲ್ಕು ವರ್ಷಗಳ ಹಿಂದೆ ರಾಮಮೂರ್ತಿನಗರದ ಚರ್ಚ್‌ ಬಳಿಗೆ ವಾಸ್ತವ್ಯ ಬದಲಿಸಿದ್ದರು. ದ್ವಿತೀಯ ಪಿಯುಸಿಯಲ್ಲಿ ಅನುತ್ತೀರ್ಣಗೊಂಡಿದ್ದ ದಿನೇಶ್‌, ಯಾವುದೇ ಕೆಲಸಕ್ಕೆ ಹೋಗುತ್ತಿರಲಿಲ್ಲ ಎಂದು ಪೊಲೀಸರು ತಿಳಿಸಿದರು.

ಚಿಕ್ಕಮ್ಮನ ಮಗ ಶಿವು ಜತೆಗೆ ದಿನೇಶ್‌ ಮನೆಯಿಂದ ಹೊರಗೆ ಹೋಗಿದ್ದರು. ಈ ವೇಳೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದರು. ತೀವ್ರ ರಕ್ರಸ್ರಾವವಾಗಿ ಅವರು ಅಸುನೀಗಿದ್ದಾರೆ. ಕೊಲೆಗೆ ನಿಖರ ಕಾರಣ ಗೊತ್ತಾಗಿಲ್ಲ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT