ನವದೆಹಲಿ: ಭಾರತರತ್ನ ಪುರಸ್ಕೃತ ಶಹನಾಯಿ ವಾದಕ ಉಸ್ತಾದ್ ಬಿಸ್ಮಿಲ್ಲಾ ಖಾನ್ ಅವರ 102ನೇ ಜನ್ಮದಿನಕ್ಕೆ ಗೂಗಲ್ ಡೂಡಲ್ ಗೌರವ ಸಲ್ಲಿಸಿದೆ.
ಉಸ್ತಾದ್ ಬಿಸ್ಮಿಲ್ಲಾ ಖಾನ್ ಅವರು ಭಾರತರತ್ನ ಪಡೆದ ಮೂರನೆಯ ಶಾಸ್ತ್ರೀಯ ಸಂಗೀತಗಾರ. ಚೆನ್ನೈ ಮೂಲದ ವಿಜಯ್ ಕ್ರಿಶ್ ಎಂಬುವರು ಉಸ್ತಾದ್ ಅವರ ಡೂಡಲ್ ಚಿತ್ರವನ್ನು ಬರೆದುಕೊಟ್ಟಿದ್ದಾರೆ.
ಖಾನ್ ಅವರು 1961ರಲ್ಲಿ ಸಂಗೀತದ ಮನೆತನದಲ್ಲಿ ಜನಿಸಿದರು. ಆರನೇ ವಯಸ್ಸಿಗೆ ವಾರಾಣಾಸಿಗೆ ಹೋದ ಇವರು ಶಹನಾಯಿಯನ್ನು ಶಾಸ್ತ್ರೋಕ್ತವಾಗಿ ಕಲಿಯಲು ಆರಂಭಿಸಿದರು.
1947ರ ಭಾರತದ ಸ್ವಾತಂತ್ರ್ಯದ ಸಂದರ್ಭದಲ್ಲಿ ಕೆಂಪು ಕೋಟೆಯಲ್ಲಿ ಹಾಗೂ ಮೊದಲ ಗಣರಾಜ್ಯೋತ್ಸವ ಸಂದರ್ಭದಲ್ಲಿ ಇವರು ನುಡಿಸಿದ ಶಹನಾಯಿ ನಾದಕ್ಕೆ ಜನರಿಂದ ಮೆಚ್ಚುಗೆಯ ಮಹಾಪೂರವೇ ಹರಿಯಿತು.
1977ರಲ್ಲಿ ಬಿಡುಗಡೆಯಾದ ಕನ್ನಡದ ಸನಾದಿ ಅಪ್ಪಣ್ಣ ಚಲನಚಿತ್ರದಲ್ಲಿ, ಡಾ.ರಾಜ್ಕುಮಾರ್ ಅವರು ಶಹನಾಯಿ ವಾದಕರಾಗಿ ಅಭಿನಯಿಸಿದ ದೃಶ್ಯಗಳಿಗೆ ಅವಶ್ಯಕವಾಗಿದ್ದ ಶಹನಾಯಿ ವಾದನವನ್ನು ಬಿಸ್ಮಿಲ್ಲಾ ಖಾನ್ ಅವರು ನುಡಿಸಿದ್ದಾರೆ.
ಜಿ.ಕೆ.ವೆಂಕಟೇಶ್ ಸಂಗೀತದಲ್ಲಿ ಎಸ್.ಜಾನಕಿಯವರು ಹಾಡಿರುವ ‘ಕರೆದರೂ ಕೇಳದೆ’ ಎಂಬ ಹಾಡಿನಲ್ಲಿ ಬರುವ ಶಹನಾಯಿ ವಾದನವನ್ನು ಬಿಸ್ಮಿಲ್ಲಾ ಖಾನರು ನುಡಿಸಿದ್ದಾರೆ.
ಉಸ್ತಾದ್ ಅವರಿಗೆ ಭಾರತರತ್ನ, ಪದ್ಮವಿಭೂಷಣ, ಪದ್ಮಭೂಷಣ, ಪದ್ಮಶ್ರೀ, ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿಗಳು ಸಂದಿವೆ. ಇವರು ಆಗಸ್ಟ್ 21, 2006ರಂದು ನಿಧನರಾದರು.