ಕೊಪ್ಪ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಶೃಂಗೇರಿ ಮಠಕ್ಕೆ ಭೇಟಿ ನೀಡುತ್ತಿರುವುದನ್ನು ಟೀಕಿಸಿರುವ ಶಾಸಕ ಡಿ.ಎನ್.ಜೀವರಾಜ್ ಹೇಳಿಕೆಯನ್ನು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ಕುಮಾರ್ ಮುರೊಳ್ಳಿ ತೀವ್ರವಾಗಿ ಖಂಡಿಸಿದ್ದು, ‘ಶಾರದಾಂಬೆಯ ದರ್ಶನ, ಗುರುಗಳ ಆಶೀರ್ವಾದ ಪಡೆಯಲು ಶಾಸಕರ ಅನುಮತಿ ಬೇಕೇ, ಅವರು ಶೃಂಗೇರಿ ಮಠಕ್ಕಿಂತಲೂ ದೊಡ್ಡವರೇ’ ಎಂದು ಪ್ರಶ್ನಿಸಿದ್ದಾರೆ.