ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‌ನಾನು ಬಿಜೆಪಿ ಸೇರುವುದಿಲ್ಲ: ಶಾಮನೂರು ಶಿವಶಂಕರಪ್ಪ ಸ್ಪಷ್ಟನೆ

Last Updated 21 ಮಾರ್ಚ್ 2018, 10:05 IST
ಅಕ್ಷರ ಗಾತ್ರ

ದಾವಣಗೆರೆ: ‘ನಾನು ಬಿಜೆಪಿ ಸೇರಲ್ಲ. ಬಿಜೆಪಿಯಲ್ಲಿ ಯಾರಾದರೂ ಜೈಲಿಗೆ ಹೋಗದೆ ಇದ್ದವರು ಇದ್ದರೆ ಕಾಂಗ್ರೆಸ್‌ಗೆ ಬರಲಿ’ ಎಂದು ಶಾಸಕ, ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷರೂ ಆದ ಶಾಮನೂರು ಶಿವಶಂಕರಪ್ಪ ಅವರು ಹೇಳಿದರು.

ಬಿಜೆಪಿ ಸೇರ್ಪಡೆ ಕುರಿತ ವದಂತಿ ಬಗ್ಗೆ ನಗರದ ಗೃಹ ಕಚೇರಿಯಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. 

‘ನಾನು ಅಥವಾ ನನ್ನ ಪುತ್ರ (ಸಚಿವ ಎಸ್‌.ಎಸ್‌.ಮಲ್ಲಿಕಾರ್ಜುನ) ಬಿಜೆಪಿ ಸೇರುವುದು ಸುಳ್ಳು. ಯಾರು ಏನಾದರೂ ಹೇಳಿಕೊಳ್ಳಲಿ’ ಎಂದು ಅವರು ತೀಕ್ಷ್ಣವಾಗಿ ನುಡಿದರು.

‘ನನಗೆ ಯಾರಿಂದಲೂ ಒತ್ತಡ ಇಲ್ಲ. ನನ್ನಂತಹ ಅಜ್ಜರ ಹತ್ತಿರ ಯಾರು ಬರುವುದೂ ಇಲ್ಲ’ ಎಂದು ಚಟಾಕಿ ಹಾರಿಸಿದರು.

‘ಸರ್ಕಾರದ ನಿರ್ಧಾರ ಕುರಿತಂತೆ ಚರ್ಚಿಸಲು ಇದೇ 23ರಂದು ಬೆಂಗಳೂರಿನಲ್ಲಿ ವೀರಶೈವ ಮಹಾಸಭಾದ ಸಭೆ ಕರೆಯಲಾಗಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT