ವೃತ್ತಿಲೋಪ ಅಡಿಯಲ್ಲಿ ಈ ಐವರು ಸಿಬ್ಬಂದಿಯನ್ನು ಕಾಲೇಜಿನ ಆಡಳಿತ ಮಂಡಳಿ ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿದ್ದ ಸಿಬ್ಬಂದಿ, ಕಾಲೇಜಿನ ಪ್ರಾಂಶುಪಾಲ, ಹಾಸ್ಟೆಲ್ ವಾರ್ಡನ್, ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತರ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರಿದ್ದರು. ಈ ಕುರಿತು ಮರಳಿ ಕೆಲಸಕ್ಕೆ ತೆಗೆದುಕೊಳ್ಳುವಂತೆ ನ್ಯಾಯಾಲಯ ಆದೇಶಿಸಿತ್ತು. ಆದರೆ, ಆಡಳಿತ ಮಂಡಳಿಯು ಆದೇಶ ಪಾಲಿಸಿರಲಿಲ್ಲ. ಇದನ್ನು ಪ್ರಶ್ನಿಸಿ ಮೈಸೂರಿನ 4ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರ (ಹಿರಿಯ ಶ್ರೇಣಿ) ನ್ಯಾಯಾಲಯದಲ್ಲಿ ಕಾರ್ಮಿಕ ನ್ಯಾಯಾಲಯದ ಆದೇಶವನ್ನು ಜಾರಿಗೊಳಿಸುವಂತೆ ಅರ್ಜಿ ಸಲ್ಲಿಸಿದ್ದರು.