ವನ್ಯಜೀವಿ ಸಂರಕ್ಷಣೆ ಯೋಜನೆಯಡಿ ಮಾನವ ಮತ್ತು ವನ್ಯಜೀವಿ ಸಂಘರ್ಷ ಕಡಿಮೆ ಮಾಡಲು ರೂಪಿಸಿದ್ದ ಕಾರ್ಯಕ್ರಮದಲ್ಲಿ, ಯಲ್ಲಾಪುರ ಅರಣ್ಯ ವಿಭಾಗವು ಕಳೆದ ಬೇಸಿಗೆಯಲ್ಲಿ ಕಾಡಿನಲ್ಲಿರುವ ಸುಮಾರು 70 ಕೆರೆಗಳ ಹೂಳೆತ್ತಿ, ಅಭಿವೃದ್ಧಿಪಡಿಸಿದೆ. ಪರಿಣಾಮವಾಗಿ ಈ ಬಾರಿ ಬೇಸಿಗೆಯಲ್ಲಿ 45ಕ್ಕೂ ಹೆಚ್ಚು ಕೆರೆಗಳಲ್ಲಿ ನೀರಿದೆ. ಹುಲಿ, ಚಿರತೆ, ಆನೆ, ಜಿಂಕೆ, ಕಾಡುಕೋಣ ಮೊದಲಾದ ವನ್ಯ ಪ್ರಾಣಿಗಳು ಕೆರೆಗೆ ಬಂದು ನೀರು ಕುಡಿದು ಹೋಗುವ ದೃಶ್ಯಗಳು ಕ್ಯಾಮರಾದಲ್ಲಿ ಸೆರೆಯಾಗಿವೆ.