ಬುಧವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ಅಧ್ಯಕ್ಷ ಎಚ್.ಬಿ.ರಾಮಕೃಷ್ಣಗೌಡ, ‘ದಲಿತ, ಹಿಂದುಳಿದ, ಆದಿವಾಸಿ, ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ರಾಜ್ಯದಲ್ಲಿ ಸಾವಿರಾರು ಸ್ವಯಂಸೇವಾ ಸಂಘಗಳು ಕಾರ್ಯನಿರ್ವಹಿಸುತ್ತಿವೆ. ಈ ಸಂಸ್ಥೆಗಳಲ್ಲಿ ದುಡಿಯುತ್ತಿರುವ ಶೇ 90ರಷ್ಟು ಜನರು ದಲಿತ, ಹಿಂದುಳಿದ ಹಾಗೂ ಬಡ ಕುಟುಂಬದವರು. ಬಹುತೇಕ ಸಂಸ್ಥೆಗಳು ಸರ್ಕಾರದ ಅನುದಾನ ಅಥವಾ ಸ್ಥಳೀಯ ದಾನಿಗಳು ನೀಡುವ ಹಣದಲ್ಲಿ ಕೆಲಸ ಮಾಡುತ್ತಿವೆ. ಸಂಸ್ಥೆಗಳಲ್ಲಿ ಕೆಲಸ ಮಾಡುವ ಸಿಬ್ಬಂದಿಗೆ ಯಾವುದೇ ಭದ್ರತೆಯಿಲ್ಲ’ ಎಂದರು.