ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಮಮೂರ್ತಿ, ಉಪಾಧ್ಯಕ್ಷೆ ರಮಾದೇವಿ, ಜೆಡಿಎಸ್ ಹಿಂದುಳಿದ ವರ್ಗ ಘಟಕ ಅಧ್ಯಕ್ಷ ಲಕ್ಷ್ಮಣ್, ಕುಂದಾಣ ಹೋಬಳಿ ಜೆಡಿಎಸ್ ಘಟಕ ಆದ್ಯಕ್ಷ ಚಂದ್ರೇಗೌಡ, ಮುಖಂಡರಾದ ಸುಬ್ಬೇಗೌಡ, ಗುರಪ್ಪ, ಮನೋಜ್ ಗೌಡ, ಶಿವರಾಮಯ್ಯ, ಶ್ರೀನಿವಾಸ್, ಕೆ.ರಮೇಶ್, ಚಿಕ್ಕನಾರಾಯಣ ಸ್ವಾಮಿ, ಗ್ರಾಮ ಪಂಚಾಯಿತಿ ಸದಸ್ಯ ನಾರಾಯಣಸ್ವಾಮಿ ಇದ್ದರು.
**
ಎಪಿಎಂಸಿ ನಿರ್ದೇಶಕ ಕೆ.ವಿ.ಮಂಜುನಾಥ್ ಮತ್ತು ತಾಲ್ಲೂಕು ಪಂಚಾಯಿತಿ ಸದಸ್ಯೆ ಶೈಲಜಾ ಜಗದೀಶ್ ಮಾತನಾಡಿ, ಸರ್ಕಾರ ಎಲ್ಲಾ ಭಾಗ್ಯಗಳ ಯೋಜನೆ ಬದಿಗೊತ್ತಿ ಗ್ರಾಮ ವಿಕಾಸ ಯೋಜನೆಗೆ ಮೊದಲ ಆದ್ಯತೆ ನೀಡಬೇಕು. ಭಾಗ್ಯಗಳಿಂದ ಆದರ್ಶ ಗ್ರಾಮಗಳಾಗಲು ಸಾಧ್ಯವಿಲ್ಲ. ಯಾವುದೇ ಅಭಿವೃದ್ಧಿ ಕಾಮಗಾರಿಗೆ ಸ್ಥಳೀಯರ ಸಹಕಾರ ಅಗತ್ಯ ಎಂದರು.