ಬೆಂಗಳೂರು: ತೆರಿಗೆ ವಂಚನೆ ಆರೋಪದ ಪ್ರಕರಣದಲ್ಲಿ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಗೆ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
₹ 25,000 ಭದ್ರತ ಠೇವಣಿ ಇಡುವುದು, ಸಾಕ್ಷ್ಯ ನಾಶ ಮಾಡಬಾರದು, ಸಾಕ್ಷಿಗಳ ಮೇಲೆ ಒತ್ತಡ ಹೇರಬಾರದು, ತನಿಖೆಗೆ ಸಹಕರಿಸಬೇಕು ಎಂಬ ಷರತ್ತು ವಿಧಿಸಿ ನ್ಯಾಯಾಧೀಶ ಎಂ.ಎಸ್. ಆಳ್ವಾ ಜಾಮೀನು ಮಂಜೂರು ಮಾಡಿದ್ದಾರೆ.
ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಸಲ್ಲಿಸಿದ್ದ ವರದಿ ಆಧರಿಸಿ ನ್ಯಾಯಾಲಯ ಮೂರು ಪ್ರಕರಣ ದಾಖಲಿಸಿಕೊಂಡಿತ್ತು. ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಕೂಡ ಜಾರಿ ಮಾಡಿತ್ತು.
ಗುರುವಾರ ಬೆಳಿಗ್ಗೆ ಡಿ.ಕೆ.ಶಿವಕುಮಾರ್, ಅವರ ಸಹೋದರ ಡಿ.ಕೆ.ಸುರೇಶ್ ನ್ಯಾಯಾಲಯಕ್ಕೆ ಹಾಜರಾಗಿದ್ದರು.