ರಾಮಸಂದ್ರ ಗ್ರಾಮದ ನಾರಾಯಣಸ್ವಾಮಿ ಮತ್ತು ಸುದರ್ಶನ್ ಶಾಲೆ ಮುಗಿದ ನಂತರ ಸಂಜೆ ವಡಗೂರು ಗೇಟ್ನಲ್ಲಿ ಊರಿಗೆ ಹಿಂದಿರುಗಲು ಬಸ್ಗೆ ಕಾಯುತ್ತಾ ನಿಂತಿದ್ದರು. ವೆಂಕಟಪ್ಪ ಬೈಕ್ನಲ್ಲಿ ಊರಿಗೆ ಹೋಗುತ್ತಿದ್ದರು. ಆಗ ಅದೇ ಮಾರ್ಗವಾಗಿ ಬಂದ ಕಾರು ರಸ್ತೆ ಬದಿಯಲ್ಲಿ ನಿಂತಿದ್ದ ವಿದ್ಯಾರ್ಥಿಗಳ ಮೇಲೆ ಹರಿದು, ವೆಂಕಟಪ್ಪರ ಬೈಕ್ಗೆ ಗುದ್ದಿದೆ. ತೀವ್ರವಾಗಿ ಗಾಯಗೊಂಡ ವಿದ್ಯಾರ್ಥಿಗಳು ಮತ್ತು ವೆಂಕಟಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.