ತಿರುವನಂತಪುರ: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಏಕದಿನ ಪಂದ್ಯದ ಸ್ಥಳಕ್ಕೆ ಸಂಬಂಧಿಸಿದ ವಿವಾದ ಬಗೆಹರಿದಿದ್ದು ತಿರುವನಂತಪುರದಲ್ಲೇ ಪಂದ್ಯ ಆಯೋಜಿಸಲು ಕೇರಳ ಕ್ರಿಕೆಟ್ ಸಂಸ್ಥೆ (ಕೆಸಿಎ) ನಿರ್ಧರಿಸಿದೆ. ನವೆಂಬರ್ನಲ್ಲಿ ನಡೆಯಲಿರುವ ಪಂದ್ಯ ವನ್ನು ತಿರುವನಂತಪುರದಿಂದ ಕೊಚ್ಚಿಗೆ ಸ್ಥಳಾಂತರಿಸಿದ್ದಕ್ಕೆ ತೀವ್ರ ವಿರೋಧ ಎದುರಾಗಿತ್ತು.