ಧಾರವಾಡ: ‘ಚುನಾವಣೆ ಸಮೀಪಿಸುತ್ತಿದ್ದಂತೆಯೇ ನನ್ನ ಹಾಗೂ ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ ಅವರಿಗೆ ಸೇರಿದ ಆಸ್ತಿಗಳ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಲಿದ್ದಾರೆ ಎಂದು ಹಲವು ಹಿತೈಷಿಗಳು ಹೇಳಿದ್ದಾರೆ. ಆದರೆ ನನ್ನ ವ್ಯವಹಾರಗಳಿಗೆ ಸಂಬಂಧಿಸಿದಂತೆ ಶುದ್ಧ ದಾಖಲೆಗಳಿದ್ದು, ಹೆದರುವ ಪ್ರಶ್ನೆಯೇ ಇಲ್ಲ’ ಎಂದು ಗಣಿ ಸಚಿವ ವಿನಯ ಕುಲಕರ್ಣಿ ಗುರುವಾರ ಹೇಳಿದರು.