ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಟಿ ದಾಳಿಗೆ ಹೆದರುವುದಿಲ್ಲ ಸಚಿವ ವಿನಯ ಕುಲಕರ್ಣಿ

Last Updated 22 ಮಾರ್ಚ್ 2018, 20:33 IST
ಅಕ್ಷರ ಗಾತ್ರ

ಧಾರವಾಡ: ‘ಚುನಾವಣೆ ಸಮೀಪಿಸುತ್ತಿದ್ದಂತೆಯೇ ನನ್ನ ಹಾಗೂ ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ ಅವರಿಗೆ ಸೇರಿದ ಆಸ್ತಿಗಳ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಲಿದ್ದಾರೆ ಎಂದು ಹಲವು ಹಿತೈಷಿಗಳು ಹೇಳಿದ್ದಾರೆ. ಆದರೆ ನನ್ನ ವ್ಯವಹಾರಗಳಿಗೆ ಸಂಬಂಧಿಸಿದಂತೆ ಶುದ್ಧ ದಾಖಲೆಗಳಿದ್ದು, ಹೆದರುವ ಪ್ರಶ್ನೆಯೇ ಇಲ್ಲ’ ಎಂದು ಗಣಿ ಸಚಿವ ವಿನಯ ಕುಲಕರ್ಣಿ ಗುರುವಾರ ಹೇಳಿದರು.

‘ನಮ್ಮ ಡೇರಿಯಲ್ಲಿ ಎರಡೂವರೆ ಸಾವಿರ ಆಕಳು ಇವೆ. ತಿಂಗಳಿಗೆ ₹1 ಕೋಟಿ ಮೌಲ್ಯದ ಹಾಲು ಮಾರಾಟ ಮಾಡುತ್ತೇನೆ. 500ಕ್ಕೂ ಹೆಚ್ಚು ಎಕರೆ ಹೊಲ ಇದೆ. ಯೋಜನಾಬದ್ಧ ಕೃಷಿ ಮಾಡುತ್ತಿದ್ದೇನೆ. ನೀರಿನ ಮಿತ ಬಳಕೆ ಹಾಗೂ ಲಾಭದಾಯಕ ಕೃಷಿಯನ್ನು ಅಳವಡಿಸಿಕೊಂಡಿದ್ದೇನೆ. ಎಲ್ಲದಕ್ಕೂ ದಾಖಲೆಗಳಿವೆ’ ಎಂದು ಸುದ್ದಿಗಾರರಿಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT