ಕಾರು ಚಾಲಕ ಮುಂದೆ ಹೋಗುತ್ತಿದ್ದ ವಾಹನವನ್ನು ಎಡ ಭಾಗದಿಂದ ಹಿಂದಿಕ್ಕುವ ಯತ್ನದಲ್ಲಿ ಈ ಅಪಘಾತ ಸಂಭವಿಸಿದೆ. ಘಟನಾ ಸಂದರ್ಭದಲ್ಲಿ ಸ್ಥಳದಲ್ಲಿ ಸುಮಾರು 80 ವಿದ್ಯಾರ್ಥಿಗಳಿದ್ದರು. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೆಂಕಟಪ್ಪರ ಸ್ಥಿತಿ ಗಂಭೀರವಾಗಿದೆ. ಕಾರು ಆಂಧ್ರಪ್ರದೇಶದ ನೊಂದಣಿ ಸಂಖ್ಯೆ ಹೊಂದಿದ್ದು, ಚಾಲಕ ವಾಹನ ಬಿಟ್ಟು ಪರಾರಿಯಾಗಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.