ಕಾರ್ಯನಿರ್ವಹಣಾಧಿಕಾರಿ ಕೆ.ಸಿ.ದೇವರಾಜೇಗೌಡ ಮಾತನಾಡಿ, ಅಕ್ಷರ ದಾಸೋಹ ಕಾರ್ಯಕ್ರಮಗಳು ಯಾವುದೇ ತೊಡಕಿಲ್ಲದೆ ಸಾಗಬೇಕು. ತಾಲ್ಲೂಕಿನಲ್ಲಿ 26 ಅಂಗನವಾಡಿ ಕಟ್ಟಡ ಪುನರ್ ನಿರ್ಮಾಣಕ್ಕೆ ಅನುದಾನ ನೀಡಲಾಗಿದೆ. ನೂತನ ಕಟ್ಟಡಗಳಲ್ಲಿ ಮಕ್ಕಳ ವಿದ್ಯಾಭ್ಯಾಸ ಮುಂದುವರಿಸಬೇಕು. ಚುನಾವಣೆ ನೀತಿ ಸಂಹಿತೆ ಜಾರಿಯಾಗುವ ಮೊದಲೇ ಎಲ್ಲ ಕಾಮಗಾರಿ ಮುಗಿಸಬೇಕು ಎಂದು ಅಧಿಕಾರಿಗೆ ಸೂಚಿಸಿದರು.