ಆದಿವಾಸಿಗಳು, ದಲಿತರು ಮತ್ತು ಹಿಂದುಳಿದ ವರ್ಗದವರ ಅಭಿವೃದ್ಧಿಗಾಗಿ ನರೇಂದ್ರ ಮೋದಿ ಸರ್ಕಾರ ಇಡೀ ದೇಶಕ್ಕೆ ನೀಡುತ್ತಿರುವ ಅನುದಾನದ ಅರ್ಧದಷ್ಟು ಮೊತ್ತವನ್ನು ಸಿದ್ದರಾಮಯ್ಯ ಅವರು ಕರ್ನಾಟಕವೊಂದರಲ್ಲೇ ವೆಚ್ಚ ಮಾಡುತ್ತಿದ್ದಾರೆ. ಮುಂದಿನ ಬಾರಿ ಕಾಂಗ್ರೆಸ್ಗೆ ಅಧಿಕಾರ ನೀಡಿದರೆ ಇದರ ಇಮ್ಮಡಿ ಮೊತ್ತವನ್ನು ಪರಿಶಿಷ್ಟ ಜಾತಿ ಮತ್ತು ಪಂಗಡದವರ ಅಭಿವೃದ್ಧಿಗೆ ಖರ್ಚು ಮಾಡಲಾಗುವುದು ಎಂದು ಭರವಸೆ ನೀಡಿದರು.