ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ಷಮೆಯಾಚಿಸಿದ ಗೋವಾ ಸಚಿವ

Last Updated 24 ಮಾರ್ಚ್ 2018, 19:30 IST
ಅಕ್ಷರ ಗಾತ್ರ

ಪಣಜಿ: ಮಹದಾಯಿ ನ್ಯಾಯಮಂಡಳಿ ಗೋವಾ ರಾಜ್ಯದ ಪರ ಮೃದುಧೋರಣೆ ಹೊಂದಿದೆ ಎಂದು ಹೇಳಿಕೆ ನೀಡಿದ ಗೋವಾ ಜಲಸಂಪನ್ಮೂಲ ಖಾತೆ ಸಚಿವ ವಿನೋದ್‌ ಪಾಲ್ಯೇಕರ್‌ ಶನಿವಾರ  ಕ್ಷಮೆಯಾಚಿಸಿದ್ದಾರೆ.

‘ಇದು ನನ್ನಿಂದ ಆಗಿರುವ ಪ್ರಮಾದ. ನ್ಯಾಯಾಂಗಕ್ಕಾಗಲಿ, ನ್ಯಾಯಾಧೀಶರಿಗಾಗಲಿ ಅಗೌರವ ತೋರಬೇಕು ಎನ್ನುವ ಉದ್ದೇಶ ನನ್ನದಾಗಿರಲಿಲ್ಲ’ ಎಂದು ಅವರು ಹೇಳಿದ್ದಾರೆ.

ಮಹದಾಯಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಕರ್ನಾಟಕ ಮತ್ತು ಗೋವಾ ರಾಜ್ಯದ ವಾದಗಳನ್ನು ನ್ಯಾಯಮಂಡಳಿ ಆಲಿಸುತ್ತಿದ್ದು, ವಿಚಾರಣೆ ಅಂತಿಮ ಹಂತದಲ್ಲಿದೆ.

ವಿಶ್ವ ಜಲ ದಿನದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ‘ನ್ಯಾಯಮಂಡಳಿಯ ನ್ಯಾಯಾಧೀಶರು ಗೋವಾ ಪರವಾಗಿದ್ದಾರೆ ಹಾಗಾಗಿ ದೇವರು ನಮಗೆ ಜಯ ದಯಪಾಲಿಸಲಿದ್ದಾನೆ’ ಎಂದಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT