<p><strong>ಪಣಜಿ: </strong>ಮಹದಾಯಿ ನ್ಯಾಯಮಂಡಳಿ ಗೋವಾ ರಾಜ್ಯದ ಪರ ಮೃದುಧೋರಣೆ ಹೊಂದಿದೆ ಎಂದು ಹೇಳಿಕೆ ನೀಡಿದ ಗೋವಾ ಜಲಸಂಪನ್ಮೂಲ ಖಾತೆ ಸಚಿವ ವಿನೋದ್ ಪಾಲ್ಯೇಕರ್ ಶನಿವಾರ ಕ್ಷಮೆಯಾಚಿಸಿದ್ದಾರೆ.</p>.<p>‘ಇದು ನನ್ನಿಂದ ಆಗಿರುವ ಪ್ರಮಾದ. ನ್ಯಾಯಾಂಗಕ್ಕಾಗಲಿ, ನ್ಯಾಯಾಧೀಶರಿಗಾಗಲಿ ಅಗೌರವ ತೋರಬೇಕು ಎನ್ನುವ ಉದ್ದೇಶ ನನ್ನದಾಗಿರಲಿಲ್ಲ’ ಎಂದು ಅವರು ಹೇಳಿದ್ದಾರೆ.</p>.<p>ಮಹದಾಯಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಕರ್ನಾಟಕ ಮತ್ತು ಗೋವಾ ರಾಜ್ಯದ ವಾದಗಳನ್ನು ನ್ಯಾಯಮಂಡಳಿ ಆಲಿಸುತ್ತಿದ್ದು, ವಿಚಾರಣೆ ಅಂತಿಮ ಹಂತದಲ್ಲಿದೆ.</p>.<p>ವಿಶ್ವ ಜಲ ದಿನದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ‘ನ್ಯಾಯಮಂಡಳಿಯ ನ್ಯಾಯಾಧೀಶರು ಗೋವಾ ಪರವಾಗಿದ್ದಾರೆ ಹಾಗಾಗಿ ದೇವರು ನಮಗೆ ಜಯ ದಯಪಾಲಿಸಲಿದ್ದಾನೆ’ ಎಂದಿದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಪಣಜಿ: </strong>ಮಹದಾಯಿ ನ್ಯಾಯಮಂಡಳಿ ಗೋವಾ ರಾಜ್ಯದ ಪರ ಮೃದುಧೋರಣೆ ಹೊಂದಿದೆ ಎಂದು ಹೇಳಿಕೆ ನೀಡಿದ ಗೋವಾ ಜಲಸಂಪನ್ಮೂಲ ಖಾತೆ ಸಚಿವ ವಿನೋದ್ ಪಾಲ್ಯೇಕರ್ ಶನಿವಾರ ಕ್ಷಮೆಯಾಚಿಸಿದ್ದಾರೆ.</p>.<p>‘ಇದು ನನ್ನಿಂದ ಆಗಿರುವ ಪ್ರಮಾದ. ನ್ಯಾಯಾಂಗಕ್ಕಾಗಲಿ, ನ್ಯಾಯಾಧೀಶರಿಗಾಗಲಿ ಅಗೌರವ ತೋರಬೇಕು ಎನ್ನುವ ಉದ್ದೇಶ ನನ್ನದಾಗಿರಲಿಲ್ಲ’ ಎಂದು ಅವರು ಹೇಳಿದ್ದಾರೆ.</p>.<p>ಮಹದಾಯಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಕರ್ನಾಟಕ ಮತ್ತು ಗೋವಾ ರಾಜ್ಯದ ವಾದಗಳನ್ನು ನ್ಯಾಯಮಂಡಳಿ ಆಲಿಸುತ್ತಿದ್ದು, ವಿಚಾರಣೆ ಅಂತಿಮ ಹಂತದಲ್ಲಿದೆ.</p>.<p>ವಿಶ್ವ ಜಲ ದಿನದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ‘ನ್ಯಾಯಮಂಡಳಿಯ ನ್ಯಾಯಾಧೀಶರು ಗೋವಾ ಪರವಾಗಿದ್ದಾರೆ ಹಾಗಾಗಿ ದೇವರು ನಮಗೆ ಜಯ ದಯಪಾಲಿಸಲಿದ್ದಾನೆ’ ಎಂದಿದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>