‘ಕೇಂದ್ರವು ಕಾಂಗ್ರೆಸ್ ಮುಖಂಡರನ್ನೇ ಗುರಿಯಾಗಿಸಿಕೊಂಡು ಐ.ಟಿ. ದಾಳಿ ನಡೆಸುತ್ತಿದೆ. ಚುನಾವಣೆ ಸಂದರ್ಭದಲ್ಲಿ ಉದ್ದೇಶಪೂರ್ವಕ ದಾಳಿ ನಡೆಸಲಾಗುತ್ತಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ. ಈ ಟೀಕೆಗೆ ಪ್ರತ್ಯುತ್ತರ ನೀಡಿರುವ ಪ್ರಧಾನ ಮುಖ್ಯ ತೆರಿಗೆ ಕಮಿಷನರ್, ‘ಆದಾಯ ತೆರಿಗೆ ದಾಳಿಯು ರಾಜಕೀಯ ಪ್ರೇರಿತವೆಂದು ಆರೋಪಿಸುವವರು ತಾಕತ್ತಿದ್ದರೆ ಇಲಾಖೆಯ ಕ್ರಮವನ್ನು ಹೈಕೋರ್ಟ್ನಲ್ಲಿ ಪ್ರಶ್ನಿಸಲಿ’ ಎಂದು ಸವಾಲೆಸೆದಿದ್ದಾರೆ (ಪ್ರ.ವಾ., ಮಾ 23).