ಈರೋಡ್: ಕಾವೇರಿ ನಿರ್ವಹಣಾ ಮಂಡಳಿಯನ್ನು (ಸಿಎಂಬಿ) ಶೀಘ್ರವೇ ರಚಿಸಬೇಕು. ಇದರ ಬದಲು ಬೇರೆ ಯಾವುದೇ ಸಮಿತಿ ರಚಿಸುವುದನ್ನು ಒಪ್ಪಲು ಸಾಧ್ಯವಿಲ್ಲ ಎಂದು ಡಿಎಂಕೆ ತಿಳಿಸಿದೆ.
ಭಾನುವಾರ ಇಲ್ಲಿ ಆರಂಭವಾದ ಪಕ್ಷದ ಎರಡು ದಿನಗಳ ಸಭೆಯಲ್ಲಿ ಈ ಕುರಿತು ವಿಶೇಷ ನಿರ್ಣಯ ಅಂಗೀಕರಿಸಲಾಗಿದೆ. ಕೇಂದ್ರ ಸರ್ಕಾರ ನಿರ್ವಹಣಾ ಮಂಡಳಿ ಬದಲಿಗೆ, ಮೇಲುಸ್ತುವಾರಿ ಸಮಿತಿ ರಚಿಸುವ ಸಾಧ್ಯತೆ ಇದೆ ಎಂಬ ಹಿನ್ನೆಲೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಡಿಎಂಕೆ ಕಾರ್ಯಾಧ್ಯಕ್ಷ ಎಂ.ಕೆ. ಸ್ಟಾಲಿನ್ ಈ ನಿರ್ಣಯ ಮಂಡಿಸಿದರು.
ಕರ್ನಾಟಕದ ಜತೆಗಿನ ಜಲವಿವಾದಕ್ಕೆ ಸಂಬಂಧಿಸಿದಂತೆ ಆಡಳಿತಾರೂಢ ಎಐಎಡಿಎಂಕೆ, ರಾಜ್ಯದ ಹಕ್ಕುಗಳನ್ನು ಸಮರ್ಥವಾಗಿ ಪ್ರತಿಪಾದಿಸಬೇಕು. ಇಲ್ಲದಿದ್ದರೆ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಡಿಎಂಕೆ ಪಕ್ಷ, ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.