ರಾಷ್ಟ್ರೀಯ ವಾರ್ತಾ ವಾಹಿನಿಯೊಂದರಲ್ಲಿ ಸಂದೀಪ್ ಕಾರ್ಯನಿರ್ವಹಿಸುತ್ತಿದ್ದರು. ಮರಳಿನ ಅಕ್ರಮಗಳಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ಶಾಮಿಲಾಗಿದ್ದಾರೆಂದು ಆರೋಪಿಸಿ ಸಂದೀಪ್ ಸುದ್ದಿಯೊಂದನ್ನು ಕಲೆಹಾಕಿದ್ದರು. ಅದರಲ್ಲಿ ಪೊಲೀಸ್ ಅಧಿಕಾರಿಯು ಅಕ್ರಮಕ್ಕೆ ಅನುವು ಮಾಡಿಕೊಡುವ ಫೋನ್ ಸಂಭಾಷಣೆ ಇತ್ತು. ಆ ಸುದ್ದಿ ಪ್ರಸಾರದ ಬಳಿಕ ಅಧಿಕಾರಿಯನ್ನು ವರ್ಗಾವಣೆ ಮಾಡಲಾಗಿತ್ತು.