ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚೆಂಡು ವಿರೂಪಗೊಳಿಸಿದ ಪ್ರಕರಣ: ಐಸಿಸಿ ವಿರುದ್ಧ ಹಿರಿಯ ಕ್ರಿಕೆಟಿಗರ ಆಕ್ರೋಶ

Last Updated 26 ಮಾರ್ಚ್ 2018, 12:05 IST
ಅಕ್ಷರ ಗಾತ್ರ

ಮುಂಬೈ: ದಕ್ಷಿಣ ಆಫ್ರಿಕಾ ಎದುರಿನ ಟೆಸ್ಟ್ ಪಂದ್ಯದಲ್ಲಿ ಚೆಂಡು ವಿರೂಪಗೊಳಿಸಲು ‘ತಂತ್ರ ರೂಪಿಸಿದ’ ಪ್ರಕರಣಕ್ಕೆ ಸಂಬಂಧಿಸಿದಂತೆ, ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ನಾಯಕ ಸ್ಟೀವ್ ಸ್ಮಿತ್ ಹಾಗೂ ಸಹ ಆಟಗಾರರಿಗೆ ಕಡಿಮೆ ಪ್ರಮಾಣದ ಶಿಕ್ಷೆ ವಿಧಿಸಿರುವುದನ್ನು ಹಿರಿಯ ಕ್ರಿಕೆಟಿಗರು ಟೀಕಿಸಿದ್ದಾರೆ.

ನ್ಯೂಲ್ಯಾಂಡ್ಸ್‌ನಲ್ಲಿ ನಡೆದ ಮೂರನೇ ಟೆಸ್ಟ್‌ ಪಂದ್ಯದ ವೇಳೆ ಆಸ್ಟ್ರೇಲಿಯಾ ಯುವ ಕ್ರಿಕೆಟಿಗ ಕ್ಯಾಮರಾನ್‌ ಬ್ಯಾಂಕ್ರಾಫ್ಟ್‌ ಹರಿತವಾದ ಸಾಧನದಿಂದ ಚೆಂಡನ್ನು ಕೆರೆದಿದ್ದರು. ನಂತರ ಆ ವಸ್ತುವನ್ನು ಒಳ ಉಡುಪಿನೊಳಗೆ ಬಚ್ಚಿಟ್ಟಿದ್ದರು. ಇದು ಟಿವಿ ದೃಶ್ಯಾವಳಿಗಳಲ್ಲಿ ಸೆರೆಯಾಗಿತ್ತು.

ದಿನದಾಟದ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ನಾಯಕ ಸ್ಟೀವ್ ಸ್ಮಿತ್‌, ಚೆಂಡು ವಿರೂಪಗೊಳಿಸಲು ಬೆಂಬಲ ನೀಡಿದ್ದನ್ನು ಒಪ್ಪಿಕೊಂಡಿದ್ದರು.

‘ಇದು ತಂಡದ ನಿರ್ಧಾರ ಆಗಿತ್ತು. ಮಧ್ಯಾಹ್ನ ಭೋಜನದ ಸಂದರ್ಭದಲ್ಲಿ ಈ ಕುರಿತು ಮಾತುಕತೆ ನಡೆದಿತ್ತು’ ಎಂದು ಹೇಳಿದ್ದ ಸ್ಟೀವ್ ಸ್ಮಿತ್‌, ‘ಪ್ರಕರಣಕ್ಕೆ ಸಂಬಂಧಿಸಿ ನಾಯಕತ್ವ ತೊರೆಯುವುದಿಲ್ಲ’ ಎಂದಿದ್ದರು.

ಆದರೆ ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿ ಸ್ಮಿತ್ ಮತ್ತು ಉಪನಾಯಕ ಡೇವಿಡ್ ವಾರ್ನರ್ ಅವರನ್ನು ಅವರ ಸ್ಥಾನದಿಂದ ವಜಾಗೊಳಿಸಿ, ನಾಯಕತ್ವದ ಜವಾಬ್ದಾರಿಯನ್ನು ವಿಕೆಟ್ ಕೀಪರ್‌ ಟಿಮ್ ಪೈನೆ ಅವರಿಗೆ ವಹಿಸಿತ್ತು.

ಐಸಿಸಿ ಆಸ್ಟ್ರೇಲಿಯಾ ಕ್ರಿಕೆಟಿಗರಿಗೆ ಶಿಕ್ಷೆ ವಿಧಿಸುವಲ್ಲಿ ಉದಾರತೆ ಮೆರೆಯುತ್ತಿದೆ ಎಂದು ಅಭಿಪ್ರಾಯಪಟ್ಟಿರುವ ಹಲವು ಹಿರಿಯ ಕ್ರಿಕೆಟಿಗರು ಮತ್ತು ಅಭಿಮಾನಿಗಳು ಟ್ವಿಟರ್‌ನಲ್ಲಿ ಟೀಕಿಸಿದ್ದಾರೆ.

ಐಸಿಸಿ ವಿರುದ್ಧ ಅಸಮಾಧಾನ: ಹಿರಿಯ ಕ್ರಿಕೆಟಿಗರ ಟ್ವೀಟ್‌ಗಳು

* ಗ್ರೇಮ್‌ ಫ್ಲವರ್‌ (ಇಂಗ್ಲೆಂಡ್‌ ಕ್ರಿಕೆಟ್‌ ತಂಡದ ಮಾಜಿ ಆಟಗಾರ)

ಆಸ್ಟ್ರೇಲಿಯಾ ಕ್ರಿಕೆಟ್‌ ಮಂಡಳಿ ಮತ್ತು ಐಸಿಸಿಯ ಶಿಸ್ತು, ವಿಶ್ವಾಸಾರ್ಹತೆ ಹೋಮಿಯೋಪತಿ ಔಷದೋಪಚಾರಕ್ಕಿಂತ ದುರ್ಬಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT