ಕೆಂಪೇಗೌಡ ಪ್ರತಿಮೆ ನಿರ್ಮಾಣ ಕಾರ್ಯ ವರ್ಷಗಳಿಂದ ನನೆಗುದಿಗೆ ಬಿದ್ದಿತ್ತು. ಹಾಗಾಗಿ ಈ ಕಾಮಗಾರಿಯನ್ನು ಆದ್ಯತೆ ಮೇರೆಗೆ ಕೈಗೆತ್ತಿಕೊಂಡಿದ್ದೇವೆ. ಇಲ್ಲಿ ಮೇಲ್ಸೇತುವೆ ವಿಸ್ತರಣೆ ಕಾಮಗಾರಿ ಪೂರ್ಣಗೊಂಡ ತಕ್ಷಣವೇ ಉದ್ಯಾನದ ಅಭಿವೃದ್ಧಿ ಮಾಡಲಾಗುವುದು ಎಂದು ಬಿಡಿಎ ಎಂಜಿನಿಯರಿಂಗ್ ಸದಸ್ಯ ಬಿ.ಎಲ್.ರವೀಂದ್ರಬಾಬು ತಿಳಿಸಿದರು.