ತಾಲ್ಲೂಕಿನ ಪಾಳ್ಯ ಗ್ರಾಮದ ಮಂಜು ‘ನಾನು ನನ್ನ ಜಮೀನಿನಲ್ಲಿ ಸುಮಾರು 15 ವರ್ಷಗಳಿಂದ ಸಾಗುವಳಿ ಮಾಡುತ್ತಾ ಬಂದಿದ್ದೇನೆ ನಮ್ಮ ಜಮೀನಿನ ಪಕ್ಕದವರು ಗಂಗಾಕಲ್ಯಾಣ ಯೋಜನೆಯಲ್ಲಿ ವಿದ್ಯುತ್ ದೀಪವನ್ನು ಹಾಕಿಸಿಕೊಂಡಿದ್ದಾರೆ. ಆದರೆ, ಅವರು ಉದ್ದೇಶ ಪೂರಕವಾಗಿ ನನ್ನ ಜಮೀನಿನಲ್ಲಿ ವಿದ್ಯತ್ ಕಂಬಗಳನ್ನು ಅಕ್ರಮವಾಗಿ ಹಾಕಿದ್ದಾರೆ. ಈ ಬಗ್ಗೆ ಸೆಸ್ಕ್ ಅಧಿಕಾರಿಗಳಿಗೆ ದೂರು ಸಲ್ಲಿಸಿದರೂ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದರು.