ಜಿಲ್ಲಾ ವಕ್ಫ್ ಕಚೇರಿ ಎದುರು ಪ್ರತಿಭಟಿಸಿದ ಮುಖಂಡರು, ‘ಕಳೆದ ಏಳು ವರ್ಷಗಳಿಂದ ಚುನಾವಣೆ ನಡೆದಿಲ್ಲ. ಶಾದಿ ಮಹಲ್ಗೆ ಈ ಹಿಂದೆ ₹30 ಲಕ್ಷ ಬಿಡುಗಡೆಯಾಗಿತ್ತು. ಆದರೆ, ಕಾಮಗಾರಿ ಅರ್ಧದಲ್ಲೇ ನಿಂತಿದೆ. ಪೂರ್ಣಗೊಳ್ಳಲು ಇನ್ನೂ ₹30 ಲಕ್ಷ ಅಗತ್ಯವಿದೆ. ಸರ್ಕಾರ ಬಿಡುಗಡೆ ಮಾಡಿರುವ ಹಣವನ್ನು ಕಾನೂನುಬಾಹಿರವಾಗಿ ಕೊಳ್ಳೆಹೊಡೆಯಲು ಕೆಲವರು ಮುಂದಾಗಿದ್ದಾರೆ’ ಎಂದು ಆರೋಪಿಸಿದರು.