ಲಿಂಗಾಯತ–ವೀರಶೈವರಿಗೆ ಪ್ರತ್ಯೇಕ ಧರ್ಮದ ಸ್ಥಾನಮಾನ ನೀಡುವಂತೆ ಕೇಂದ್ರಕ್ಕೆ ಶಿಫಾರಸು ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಮುಸಲ್ಮಾನರು, ಕ್ರೈಸ್ತರು, ಬೌದ್ಧರು, ಜೈನರು ಮತ್ತು ಪಾರ್ಸಿಗಳಿಗೆ ಈಗಾಗಲೇ ಈ ಸ್ಥಾನವನ್ನು ನೀಡಲಾಗಿದೆ. ಕುರುಬರೂ ತಮ್ಮನ್ನು ಕನಕ ಪಂಥವೆಂದು ಪರಿಗಣಿಸಬೇಕೆಂದು ಕೇಳುತ್ತಿದ್ದಾರೆ. ಉಪ್ಪಾರರೂ ತಮಗೆ ಅಲ್ಪಸಂಖ್ಯಾತ ಸ್ಥಾನಮಾನವನ್ನು ಕೊಡಬೇಕೆಂದು ಬೇಡಿಕೆ ಇಟ್ಟಿದ್ದಾರೆ.