‘ಗಂಗಾಮತ ಸಮಾಜದ ಅಭಿವೃದ್ಧಿಗೆ ಕಾಮಗಾರಿಗಳನ್ನು ಹಮ್ಮಿಕೊಳ್ಳುವಂತೆ ಹಾಗೂ ಅನುದಾನ ನೀಡುವಂತೆ ಈ ಹಿಂದೆ ಹಲವು ಬಾರಿ ಕೋರಿಕೆ ಸಲ್ಲಿಸಿದ್ದರೂ ನೀಡಿಲ್ಲವೇಕೆ ಎಂದು ಸವದಿ ಅವರನ್ನು ಪ್ರಶ್ನಿಸಿದ್ದೆ. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಅವರ ಕಾರು ಚಾಲಕ ಮುರುಗೇಶ ಮೋಟಗಿ, ಆಪ್ತ ಸಹಾಯಕ ವಿಜಯ ಮಂಗಸೂಳಿ ನನ್ನ ಮೇಲೆ ಹಲ್ಲೆ ಮಾಡಿದ್ದಾರೆ’ ಎಂದು ರಾಜು ಸುದ್ದಿಗಾರರಿಗೆ ತಿಳಿಸಿದರು.